ಪಶ್ಚಿಮ ಏಷ್ಯಾ ಪರಿಸ್ಥಿತಿಯನ್ನು ಕುರಿತು ಸರ್ಕಾರವು ನವದೆಹಲಿ ಸಂಸತ್ ಭವನದಲ್ಲಿ ಎಲ್ಲಾ ಪಕ್ಷಗಳ ಸಭೆ ನಡೆಸಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಗೆ ಅಧ್ಯಕ್ಷತೆ ವಹಿಸಿದರು. ಅಮಿತ್ ಶಾ, ಎಸ್. ಜೈಶಂಕರ್ ಹಾಗೂ ಹರದೀಪ್ ಸಿಂಗ್ ಪುರಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಿರೋಧ ಪಕ್ಷದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ ಎಂದು ಹೇಳಿದರು. ಎಲ್ಲಾ ಪಕ್ಷಗಳು ಸರ್ಕಾರದ ಕ್ರಮಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿವೆ. ಮೂಕುಲ್ ವಾಸ್ನಿಕ್ ಮತ್ತು ತಾರಿಕ್ ಅನ್ವರ್ ಸಹ ಉಪಸ್ಥಿತರಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಏಳು ಕಾರ್ಯಪಡೆಗಳನ್ನು ಘೋಷಿಸಿದ್ದರು.
0 Comments